ಬಾಲ್ಯ ವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಬೇಕು - ಉಳ್ಳಾಲ ಸಹಾಯಕ ಪೋಲಿಸ್ ಉಪ ನಿರೀಕ್ಷಕರಾದ ಮನ್ಸೂರ್ ಕರೆ
Thursday, July 25, 2024
ಬಾಲ್ಯ ವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಬೇಕು - ಸಹಾಯಕ ಪೋಲಿಸ್ ಉಪ ನಿರೀಕ್ಷಕರಾದ ಮನ್ಸೂರ್ ಕರೆ
ಅನುದಾನಿತ ಟಿಪ್ಪು ಸುಲ್ತಾನ್ ಪ್ರೌಢಶಾಲೆ, ಕೋಟೆಪುರ - ಉಳ್ಳಾಲ ಇಲ್ಲಿ ನಡೆದ ಬಾಲ್ಯ ವಿವಾಹ ಮತ್ತು ಫೋಕ್ಸೋ ಕಾಯಿದೆಯ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮ ದಲ್ಲಿ ಮಾತಾಡಿದರು.
ಲೈಂಗಿಕ ಅಪರಾಧ ಗಳಿಂದ ಮಕ್ಕಳ ರಕ್ಷಣೆ ಮಾಡಬೇಕು
ಈ ಬಗ್ಗೆ ಪೋಷಕರು ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಡಿ ಶೆಟ್ಟಿ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ವಹಿಸಿದ್ದರು.
ಪ್ರೌಡ ಶಾಲೆಯ ಎಲ್ಲಾ ವಿದ್ಯಾರ್ಥಿ ಗಳು ಹಾಗೂ ಸಂಸ್ಥೆಯ ಎಲ್ಲಾ ಸಿಬ್ಬಂದಿ ಗಳು ಹಾಜರಿದ್ದರು